ಉಜಿರೆಯಲ್ಲಿ 21ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೆಳನ

Update: 2016-11-26 15:48 GMT

 ಮಂಗಳೂರು, ನ. 26: ಕನ್ನಡ ಸಾಹಿತ್ಯ ಪರಿಷತ್ 100 ವರ್ಷ ಪೂರೈಸಿ ಶತಮಾನೋತ್ಸವದ ಉತ್ತರಾರ್ಧದ ಈ ಸಂದರ್ಭದಲ್ಲಿ ದ.ಕ. ಜಿಲ್ಲಾ 21ನೆಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ದನ ಸ್ವಾಮಿ ದೇವಾಲಯದ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿದೆ ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

ಜನವರಿ 27, 28, 29ರಂದು ಸಾಹಿತ್ಯಜಾತ್ರೆ ಸ್ವರೂಪದಲ್ಲಿ ಸಮ್ಮೇಳನ ನಡೆಸಲು ರೂಪುರೇಶೆಗಳನ್ನು ಈಗಾಗಲೇ ಸಿದ್ಧಪಡಿಸಲಾಗಿದೆ.

ಪೂರ್ವಭಾವಿ ಸಭೆ : ಈ ಬಗ್ಗೆ ಪೂರ್ವಭಾವಿ ಸಭೆ ನವೆಂಬರ್ 30ರಂದು ಸಂಜೆ 4 ಗಂಟೆಗೆ ಉಜಿರೆಯ ರಾಮಕೃಷ್ಣ ಸಭಾಂಗಣದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಘವ ಪಡುವೆಟ್ನಾಯರ್ ಅಧ್ಯಕ್ಷತೆಯಲ್ಲಿ ಪ್ರದೀಪ ಕುಮಾರ ಕಲ್ಕೂರರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ತಾಲೂಕು ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ. ಬಿ. ಯಶೋವರ್ಮರ ಉಪಸ್ಥಿತಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೌರವ ಕಾರ್ಯದರ್ಶಿ ಡಾ. ಎಂ.ಪಿ. ಶ್ರೀನಾಥ್ (ಮೊಬೈಲ್ ಸಂಖ್ಯೆ 9448558583)ರವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News