×
Ad

ಕುಕ್ಕೆ: ಷಷ್ಠಿ ಜಾತ್ರೋತ್ಸವ ಆರಂಭ

Update: 2016-11-26 23:50 IST

ಸುಬ್ರಹ್ಮಣ್ಯ, ನ.26: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ಜಾತ್ರೋತ್ಸವಕ್ಕೆ ಶನಿವಾರ ಚಾಲನೆ ದೊರೆತಿದೆ.

ಬೆಳಗ್ಗೆ ದೇವಳದ ಒಳಾಂಗಣದಲ್ಲಿ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ವಿವಿಧ ವೈದಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು. ಬಳಿಕ ರಾಮ-ಲಕ್ಷ್ಮಣ ಎಂಬ ಹೆಸರಿನ ಜೋಡಿ ಅನ್ನದ ಕೊಪ್ಪರಿಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿ, ದೇವಳದ ಒಳಾಂಗಣದಲ್ಲಿರುವ ದೊಡ್ಡದಾದ ಎರಡು ಒಲೆಗಳ ಮೇಲೆ ಏರಿಸಲಾಯಿತು. ಕೊಪ್ಪರಿಗೆಗಳಲ್ಲಿ ಅನ್ನ ಬೆಂದ ಬಳಿಕ ಅದಕ್ಕೆ ಪೂಜೆ ಸಲ್ಲಿಸಲಾಯಿತು. ಡಿ.11ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News