ಆಕ್ರೋಶ ದಿನ: ನ.28ರಂದು ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

Update: 2016-11-27 11:46 GMT

ಬಂಟ್ವಾಳ, ನ.27: ಕೇಂದ್ರ ಸರಕಾರ ಯಾವುದೇ ಪೂರ್ವ ತಯಾರಿ ಇಲ್ಲದೆ 500, 1000 ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಸಾಮಾನ್ಯರು ಸಂಕಷ್ಟಕ್ಕೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಜನ ವಿರೋಧಿ ನೀತಿಯ ವಿರುದ್ಧ ದೇಶಾದ್ಯಂತ ಹಮ್ಮಿಕೊಂಡಿರುವ ’ಆಕ್ರೋಶ ದಿನ’ ಅಂಗವಾಗಿ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ನ.28ರಂದು ಬೆಳಗ್ಗೆ 10 ಗಂಟೆಗೆ ಬಿ.ಸಿ.ರೋಡ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ ಪ್ರಕಟನೆಯಲ್ಲಿ  ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News