ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2016-11-27 16:06 GMT

ಕಾರ್ಕಳ, ನ.27: ಮಾಳ ಗ್ರಾಮದ ಪೇರಡ್ಕ ಕೂಡಬೆಟ್ಟು ಎಂಬಲ್ಲಿ ನ.26ರಂದು ರಾತ್ರಿ 9.30ರ ಸುಮಾರಿಗೆ ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಬೈಕ್ ಸವಾರ ಕುಕ್ಕುಂದೂರಿನ ರವಿ ಎಂದು ಗುರುತಿಸಲಾಗಿದೆ. ಸಹಸವಾರ, ಮೃತರ ಸಂಬಂಧಿ ಅರುಣ್ ಎಂಬವರು ತೀವ್ರವಾಗಿ ಗಾಯ ಗೊಂಡು ಕಾರ್ಕಳ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರ್ಕಳ ಕಡೆಯಿಂದ ಮಲ್ಲಾರು ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಮಾಳ ಚೆಕ್ ಪೋಸ್ಟ್ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆ ಯಿತು. ಇದರಿಂದ ಬೈಕ್ ಸವಾರರಿಬ್ಬರು ರಸ್ತೆಗೆ ಬಿದ್ದು ತೀವ್ರವಾಗಿ ಗಾಯ ಗೊಂಡರು. ಅವರಲ್ಲಿ ರವಿ ಉಡುಪಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News