ನಗರೋಟಾದಲ್ಲಿ ನಾಲ್ವರು ಉಗ್ರರ ಹತ್ಯೆ, ಮೂವರು ಯೋಧರು ಹುತಾತ್ಮರು
Update: 2016-11-29 14:41 IST
ಶ್ರೀನಗರ, ನ.29: ಜಮ್ಮು ಮತ್ತು ಕಾಶ್ಮೀರ ಹೊರವಲಯದ ನಗರೋಟಾದಲ್ಲಿ ಇಂದು ಬೆಳಗ್ಗೆ ಭಾರತದ ಸೇನಾ ನೆಲೆಯ ಮೇಲೆ ಗ್ರೇನೆಡ್ ದಾಳಿ ನಡೆಸಿದ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಇದೇ ವೇಳೆ ಭಾರತದ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಬೆಳಗ್ಗೆ 5 ಗಂಟೆಯ ಹೊತ್ತಿಗೆ ಸೇನಾ ಶಿಬಿರಕ್ಕೆ ನುಗ್ಗಿರುವ ಉಗ್ರರು ಗ್ರೇನೆಡ್ ದಾಳಿ ನಡೆಸಿದ್ದಾರೆ. ಆಗ ನಡೆದ ಗುಂಡಿನ ಚಕಮಕಿಯಲ್ಲಿ ದಾಳಿ ನಡೆಸಿದ ಎಲ್ಲ ನಾಲ್ವರು ಉಗ್ರರನ್ನು ಕೊಲ್ಲಲಾಗಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಬಲಿಯಾಗಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ.
ಮೂವರು ಉಗ್ರರ ಹತ್ಯೆ: ಜಮ್ಮು ಮತ್ತು ಕಾಶ್ಮೀರದ ಸಾಂಬಾದ ಚಾಮ್ಲಿಯಾಲ್ ನಲ್ಲಿ ನುಸುಳಲು ಯತ್ನಿಸಿದ ಮೂವರು ಉಗ್ರರನ್ನು ಗಡಿ ರಕ್ಷಣಾ ಪಡೆ(ಬಿಎಸ್ಎಫ್) ಕೊಂದು ಹಾಕಿದೆ .ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಬಿಎಸ್ಎಫ್ ಜವಾನ ಸಂಜಯ್ ಕುಮಾರ್ ಎಂಬವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.