ಅಕ್ರಮ ಮದ್ಯ ಮಾರಾಟ : ಆರೋಪಿಯ ಬಂಧನ

Update: 2016-11-29 12:33 GMT

ಪುತ್ತೂರು, ನ.29 : ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ಮಾಣಿ ಮೈಸೂರು ರಾಜ್ಯ ಹೆದ್ದಾರಿ ಬದಿಯಲ್ಲಿರುವ ಪ್ರಯಾಣಿಕರ ಬಸ್ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ,ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ನಿವಾಸಿ ಸುಂದರ ರೈ (45) ಬಂಧಿತ ಆರೋಪಿ. ಆರೋಪಿಯು ರಾತ್ರಿ ವೇಳೆ ಮುಕ್ರಂಪಾಡಿಯಲ್ಲಿರುವ ಪ್ರಯಾಣಿಕರ ಬಸ್ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ ಠಾಣೆಯ ಎಸ್‌ಐ ಒಮನ, ಸಿಬ್ಬಂದಿ ಹರೀಶ್ ಮತ್ತು ಶೈಲಾ ಅವರು ಕಾರ್ಯಾಚರಣೆ ನಡೆಸಿ ಈ ಅಕ್ರಮ ಮದ್ಯ ಮಾರಾಟ ಪ್ರಕರಣವನ್ನು ಪತ್ತೆ ಮಾಡಿದ್ದಾರೆ.

ಪೊಲೀಸರು ಆರೋಪಿ ಸುಂದರ ರೈಯನ್ನು ಬಂಧಿಸಿ, ಆತನ ವಶದಲ್ಲಿದ್ದ ರೂ.1745 ಮೌಲ್ಯದ ಮದ್ಯ ಮತ್ತು ಆತನ ಬಳಿಯಿದ್ದ ರೂ.400 ನಗದು ಹಣವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News