ಡಿಕೆಎಸ್‌ಸಿ 20ನೆ ವಾರ್ಷಿಕೋತ್ಸವ ಸಂಭ್ರಮಕ್ಕೆ ಡಿ.2ರಂದು ಚಾಲನೆ

Update: 2016-11-30 05:59 GMT

ಉಡುಪಿ, ನ.30: ಮೂಳೂರಿನಲ್ಲಿ ಕಳೆದ ಎರಡು ದಶಕಗಳಿಂದ ಕಾರ್ಯಾಚರಿಸುತ್ತಿರುವ ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್(ಡಿಕೆಎಸ್‌ಸಿ)ನ 20ನೆ ವಾರ್ಷಿಕೋತ್ಸವದ ಸಮಾರೋಪ ಸಮಾರಂಭವು ಡಿ.2ರಿಂದ 4ರವರೆಗೆ ನಡೆಯಲಿದೆ. ಇದರ ಉದ್ಘಾಟನಾ ಸಮಾರಂಭವು ಡಿ.2ರಂದು ಸಂಜೆ ಮೂಳೂರು ಅಲ್‌ಇಹ್ಸಾನ್ ಸ್ಕೂಲ್ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ.

ಡಿ.2ರಂದು ಸಂಜೆ 4:30ಕ್ಕೆ ಸಮಾರಂಭವನ್ನು ಅಸ್ಸೈಯದ್ ಮುನವ್ವರ್ ಅಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಉದ್ಘಾಟಿಸಲಿರುವರು. ಸಮಸ್ತ ಕೇರಳ ಮುಶಾವರದ ಪ್ರಧಾನ ಕಾರ್ಯದರ್ಶಿ ಹಾಗೂ ಕಾಸರಗೋಡು ಖಾಝಿ ಶೈಖುನಾ ಆಲಿಕುಟ್ಟಿ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಅಲ್ಹಾಜ್ ಅಸ್ಸೈಯದ್ ಕೆ.ಎಸ್.ಆಟಕೋಯ ತಂಙಳ್ ಕುಂಬೋಳ್ ದುಆ ನೆರವೇರಿಸುವರು.

ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್, ಸಮಸ್ತ ಕೇರಳ ಮುಶಾವರ ಸದಸ್ಯ ಅಲ್ಹಾಜ್ ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲ್ ಹಾಗೂ ಮೂಡಿಗೆರೆ ಖಾಝಿ ಅಲ್ಹಾಜ್ ಎಂ.ಎ. ಖಾಸಿಂ ಮುಸ್ಲಿಯಾರ್ ಕುಂಬ್ಳೆ ಮುಖ್ಯ ಭಾಷಣ ಮಾಡುವರು.

ದಿಲ್ಲಿಯ ಫಲಾಹ್ ರಿಸರ್ಚ್ ಸೆಂಟರ್‌ನ ಅಧ್ಯಕ್ಷ ಡಾ.ಫಝಲುಲ್ಲಾ ಚಿಸ್ತಿ ಹಾಗೂ ಎಸ್ಕೆಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ವೌಲಾನ ಅನೀಸ್ ಕೌಸರಿ ವಿಶೇಷ ಭಾಷಣ ಮಾಡುವರು.

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಶಾಸಕರಾದ ವಿನಯ ಕುಮಾರ್ ಸೊರಕೆ, ಬಿ.ಎ.ಮೊಯ್ದಿನ್ ಬಾವ, ಯೆನೆಪೊಯ ಗ್ರೂಪ್ ಅಧ್ಯಕ್ಷ ಅಲ್ಹಾಜ್ ವೈ.ಮುಹಮ್ಮದ್ ಕುಂಞಿ, ಮುಸ್ಲಿಮ್ ಸೆಂಟ್ರಲ್ ಕಮಿಟಿ ದ.ಕ. ಮತ್ತು ಉಡುಪಿ ಇದರ ಅಧ್ಯಕ್ಷ ಅಲ್ಹಾಜ್ ಕೆ.ಎಸ್.ಮುಹಮ್ಮದ್ ಮಸೂದ್, ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಅಲ್ಹಾಜ್ ಬಿ.ಎಚ್.ಖಾದರ್ ಬಂಟ್ವಾಳ, ಅಲ್ ಮುಝೈನ್ ಗ್ರೂಪ್ ಅಧ್ಯಕ್ಷ ಉದ್ಯಮಿ ಝಕರಿಯಾ ಜೋಕಟ್ಟೆ, ದ.ಕ. ಜಿಲ್ಲಾ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷ ಅಲ್ಹಾಜ್ ಇಬ್ರಾಹೀಂ ಕೋಡಿಜಾಲ್, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ, ಕಾಶಿಪಟ್ಣ ದಾರುನ್ನೂರಿನ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ ಬಂದರ್, ಕಾಂಗ್ರೆಸ್ ಅಲ್ಪಸಂಖ್ಯಾತ ಅಭಿವೃದ್ಧಿ ಘಟಕದ ಅಧ್ಯಕ್ಷ ಹಾಜಿ ಮೊಯ್ದಿನಬ್ಬ ಪಲಿಮಾರ್, ತೋಡಾರ್ ಶಂಸುಲ್ ಉಲಮಾ ಅರಬಿರ್ ಕಾಲೇಜಿನ ಪ್ರಾಂಶುಪಾಲ ಉಸ್ಮಾನ್ ಫೈಝಿ ತೋಡಾರ್, ಜಂಮಿಯ್ಯತುಲ್ ಮುಅಲ್ಲಿಮೀನ್‌ನ ದ.ಕ. ಜಿಲ್ಲಾ ಅಧ್ಯಕ್ಷ ವೌಲಾನ ಉಮರ್ ದಾರಿಮಿ ಪಟ್ಟೋರಿ, ಗುರುಪುರ ರೇಂಜ್ ಮದ್ರಸ ಕಮಿಟಿಯ ಅಧ್ಯಕ್ಷ ನೌಶಾದ್ ಹಾಜಿ ಸೂರಲ್ಪಾಡಿ ಭಾಗವಹಿಸುವರು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News