ಭಾಸ್ಕರ್ ಶೆಟ್ಟಿ ಕೊಲೆ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

Update: 2016-11-30 17:31 GMT

ಉಡುಪಿ, ನ.30: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿ ಗಳ ನ್ಯಾಯಾಂಗ ಬಂಧನವನ್ನು ಉಡುಪಿ ನ್ಯಾಯಾಲಯವು ಮತ್ತೆ ವಿಸ್ತರಿಸಿ ಆದೇಶ ನೀಡಿದೆ.

ಮಂಗಳೂರಿನ ಸಬ್‌ಜೈಲಿನಲ್ಲಿದ್ದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ, ನಿರಂಜನ್ ಭಟ್ ಅವರನ್ನು ಇಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶ ರಾಜೇಶ್ ಕರ್ಣಂ ಆರೋಪಿಗಳ ನ್ಯಾಯಾಂಗ ಬಂಧನವನ್ನು ಡಿ.14ರವರೆಗ ವಿಸ್ತರಿಸಿ ಆದೇಶ ನೀಡಿದರು.
 
ರಾಜೇಶ್ವರಿ ಶೆಟ್ಟಿ ವ್ಯವಹಾರದಲ್ಲಿ ಆಕೆಯ ತಾಯಿಗೆ ಜಿಪಿಎ ನೀಡಿರುವು ದನ್ನು ರದ್ದುಗೊಳಿಸುವಂತೆ ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಡ್ತಿ ಇಂದು ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಯ ಜಾಮೀನು ಅರ್ಜಿ ವಿಚಾರಣೆಯನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಅಧಿಕಾರ ಸ್ವೀಕರಿಸದ ಹಿನ್ನೆಲೆಯಲ್ಲಿ ಡಿ.6ಕ್ಕೆ ಮುಂದೂಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News