ಭಾರತೀಯ ಪರಿಸರ ಕಾರ್ಯಕರ್ತೆಗೆ ಮಕ್ಕಳ ಶಾಂತಿ ಪ್ರಶಸ್ತಿ ಗೌರವ

Update: 2016-12-03 18:44 GMT

 ದ ಹೇಗ್, ಡಿ. 3: ಪರಿಸರ ನಾಶದ ವಿರುದ್ಧ ಹೋರಾಟವನ್ನು ಕೈಗೆತ್ತಿಕೊಂಡಿರುವ ದುಬೈಯಲ್ಲಿ ನೆಲೆಸಿರುವ 16 ವರ್ಷದ ಭಾರತೀಯ ಪರಿಸರ ಕಾರ್ಯಕರ್ತೆ ಈ ವರ್ಷದ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ದ ಹೇಗ್‌ನಲ್ಲಿ ನಡೆದ ಸಮಾರಂಭದಲ್ಲಿ ಕೆಹ್‌ಕಾಶನ್ ಬಸು ಅವರಿಗೆ ಬಾಂಗ್ಲಾದೇಶದ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ಪ್ರಶಸ್ತಿಯನ್ನು ವಿತರಿಸಿದರು. ಪರಿಸರ ಸಂಬಂಧಿ ಕಾಯಿಲೆಗಳಿಂದಾಗಿ ಪ್ರತಿ ವರ್ಷ ಐದು ವರ್ಷಕ್ಕೂ ಕಡಿಮೆ ಪ್ರಾಯದ 30 ಲಕ್ಷಕ್ಕೂ ಅಧಿಕ ಮಕ್ಕಳು ಸಾಯುತ್ತಿರುವ ಹಿನ್ನೆಲೆಯಲ್ಲಿ ಬಸು ಮಾಡಿರುವ ಸಾಧನೆ ಮಹತ್ವ ಪಡೆದುಕೊಂಡಿದೆ ಎಂದು 2006ರ ಶಾಂತಿ ಪ್ರಶಸ್ತಿ ವಿಜೇತ ಯೂನುಸ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News