ರಾಜ್ಯಮಟ್ಟದ ಯುವಜನೋತ್ಸವ

Update: 2016-12-05 18:22 GMT

ಉಡುಪಿ, ಡಿ.5: ಪ್ರಸಕ್ತ (2016-17) ಸಾಲಿನ ರಾಜ್ಯಮಟ್ಟದ ಯುವಜನೋತ್ಸವವು ಡಿ.16ರಿಂದ 18ರವರೆಗೆ ಮೈಸೂರಿನಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಸ್ಪರ್ಧಿಗಳು ಡಿ.16ರಂದು ಅಪರಾಹ್ನ 1ರೊಳಗೆ ನಂಜರಾಜ ಬಹದ್ದೂರ್ ಛತ್ರ, ಮೈಸೂರು ಇಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಸ್ಪರ್ಧಾಳುಗಳು ತಮ್ಮ ಪ್ರವೇಶ ಪತ್ರಗಳನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಕಚೇರಿಯಿಂದ ಡಿ.13ರೊಳಗೆ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0820-2521324, 9480886467ರನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News