ಕರ್ನಾಟಕದಲ್ಲಿ ಇಂದು ಶೋಕಾಚರಣೆ

Update: 2016-12-06 04:45 GMT

ಬೆಂಗಳೂರು, ಡಿ.6: ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಒಂದು ದಿನ ಶೋಕಾಚರಣೆಯನ್ನು ಸರಕಾರ ಘೋಷಿಸಿದೆ.
 ಜಯಲಲಿತಾ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಾದ್ಯಂತ ಇಂದು ಶೋಕಾಚರಣೆ ಘೋಷಿಸಿದ್ದಾರೆ.
ಇದೇ ಸಂದರ್ಭ ಜಯಲಲಿತಾ ಅವರು ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 11 ಗಂಟೆಗೆ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಅವರು ಚೆನ್ನೈಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News