ರಾಷ್ಟ್ರಪತಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ

Update: 2016-12-06 07:01 GMT

 ಹೊಸದಿಲ್ಲಿ, ಡಿ.6: ದಿಲ್ಲಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಮಾನದಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಮಾನವನ್ನು ದಿಲ್ಲಿಗೆ ವಾಪಾಸು ಕೊಂಡೊಯ್ಯಲಾಗಿದೆ.

ಸೋಮವಾರ ರಾತ್ರಿ ನಿಧನರಾದ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಂಗಳವಾರ ಬೆಳಗ್ಗೆ ಚೆನ್ನೈಗೆ ಪ್ರಯಾಣಿಸಲು ಬಯಸಿದ್ದರು.

ಇದೇ ವೇಳೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಯಲಲಿತಾರ ಅಂತಿಮ ದರ್ಶನ ಪಡೆಯಲು ಚೆನ್ನೈಗೆ ತಲುಪಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News