ಕುರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Update: 2016-12-06 10:39 GMT

ಕೊಣಾಜೆ, ಡಿ.6: ಬಂಟ್ವಾಳ ತಾಲೂಕಿನ ಕುರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಂಗಳವಾರ ಶಿಲಾನ್ಯಾಸ ನೆರವೇರಿತು.

ಆರೋಗ್ಯ ಸಚಿವ ಯು.ಟಿ.ಖಾದರ್ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು. ಅತಿಥಿಗಳಾಗಿ ಬಂಟ್ವಾಳ ತಾಪಂ ಅಧ್ಯಕ್ಷ ಕೆ.ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಪಂ ಸದಸ್ಯೆ ಮಮತಾ ಗಟ್ಟಿ, ತಾಪಂ ಸದಸ್ಯರಾದ ನವೀನ್‌ಕುಮಾರ್ ಪಾದಲ್ಪಾಡಿ, ಹೈದರ್ ಕೈರಂಗಳ, ಸವಿತಾ ಹೇಮಂತ್ ಕರ್ಕೇರ, ಕುರ್ನಾಡು ಗ್ರಾಪಂ ಸದಸ್ಯ ಶೈಲಜಾ, ಬಾಳೆಪುಣಿ ಗ್ರಾಪಂ ಅಧ್ಯಕ್ಷ ಲೀಲಾವತಿ, ನರಿಂಗಾನ ಗ್ರಾಪಂ ಅಧ್ಯಕ್ಷ ಇಸ್ಮಾಯೀಲ್, ಸಜಿಪ ಪಡು ಗ್ರಾಪಂ ಅಧ್ಯಕ್ಷ ಉಮಾವತಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News