ಪುತ್ತೂರು: ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತ್ಯು

Update: 2016-12-06 12:18 GMT

ಪುತ್ತೂರು, ಡಿ.6: ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಲಿಳಿದ ವಿದ್ಯಾರ್ಥಿಯೊಬ್ಬ ಮುಳುಗಿ ಮೃತಪಟ್ಟ ಘಟನೆ ನಗರ ಹೊರವಲಯದ ದರ್ಬೆಯಲ್ಲಿ ಇಂದು ಪೂರ್ವಾಹ್ನ ನಡೆದಿದೆ.

ಮೃತರನ್ನು ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮ ಕೈಕಾರ ತೊಟ್ಟಿಲು ಎಂಬಲ್ಲಿನ ಗಂಗಾಧರ ರೈ ಎಂಬವರ ಪುತ್ರ ಕಾರ್ತಿಕ್ ರೈ(19) ಎಂದು ಗುರುತಿಸಲಾಗಿದೆ. ಇವರು ಫಿಲೋಮಿನಾ ಕಾಲೇಜಿನ ಪ್ರಥಮ ಬಿ.ಕಾಂ ವಿದ್ಯಾರ್ಥಿಯಾಗಿದ್ದರು.

ಗೆಳೆಯನೊಂದಿಗೆ ದರ್ಬೆಯ ಖಾಸಗಿ ಈಜುಕೊಳದಲ್ಲಿ ಈಜಲೆಂದು ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ. ಈಜುತ್ತಿದ್ದ ಕಾರ್ತಿಕ್ ಇದ್ದಕ್ಕಿದ್ದಂತೆ ಮುಳುಗಿರೆನ್ನಲಾಗಿದೆ. ಕೂಡಲೇ ಅವರನ್ನು ಮೇಲಕ್ಕೆತ್ತಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಹೃದಯಾಘಾತಕ್ಕೊಳಗಾಗಿ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕಾರ್ತಿಕ್ ಉತ್ತಮ ಕ್ರಿಕೆಟ್ ಆಟಗಾರನಾಗಿದ್ದರು.

ಘಟನೆಯ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News