ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಟಿಪ್ಪರ್ ಲಾರಿ

Update: 2016-12-09 13:41 GMT

ಬಂಟ್ವಾಳ, ಡಿ. 9 :  ಮಾಣಿ ಸಮೀಪದ ಗಡಿಯಾರದಲ್ಲಿ ಮರಳು ಸಾಗಾಟದ ಟಿಪ್ಪರ್ ಲಾರಿಯೊಂದು ಬಸ್ಸಿ ಗೆ ಢಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಶುಕ್ರವಾರ ನಡೆದಿದೆ.

ಉಪ್ಪಿನಂಗಡಿ ಸಮೀಪ ಮರಳು ಸಾಗಾಟ ಮಾಡಿ ಹಿಂತಿರುಗುತ್ತಿದ್ದ ಲಾರಿ ಮಾಣಿ ಸಮೀಪದ ಗಡಿಯಾರ ಅಪಾಯಕಾರಿ ತಿರುವಿನಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದೆ.

ಘಟನೆಯಲ್ಲಿ ಕ್ಲೀನರ್ ಹಾಗೂ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News