ಮೇಟಿಯನ್ನು ಸಚಿವ ಸಂಪುಟದಿಂದ ಉಚ್ಚಾಟಿಸಲು ಕಾಂಗ್ರೆಸ್ ಮುಖಂಡನಿಂದಲೇ ಒತ್ತಾಯ!

Update: 2016-12-12 08:20 GMT

ಮಂಗಳೂರು, ಡಿ.12: ಅಬಕಾರಿ ಸಚಿವ ಎಚ್.ವೈ.ಮೇಟಿಯವರ ಮೇಲಿನ ರಾಸಲೀಲೆ ಪ್ರಕರಣದ ಆರೋಪದ ಸಿಲುಕುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಕಳಂಕ ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನೈತಿಕತೆ ಇದ್ದರೆ ಮೇಟಿಯನ್ನು ಸಚಿವ ಸಂಪುಟದಿಂದ ಉಚ್ಚಾಟಿಸಲಿ ಎಂದು ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ.
 ಮಂಗಳೂರಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರಿಗೆ ಕ್ಯಾಬಿನೆಟ್ ಮಂತ್ರಿಗಳ ಮೇಲೆ, ಅಧಿಕಾರಿಗಳ ಮೇಲೆ ನಿಯಂತ್ರಣವಿಲ್ಲ. ಅವರು ಸಂಪೂರ್ಣ ವಿಫಲರಾಗಿದ್ದಾರೆ. ಮೌಲ್ಯಗಳಿಗೆ ತಿಲಾಂಜಲಿ ಕೊಟ್ಟಿದ್ದಾರೆ. ಯಾರಾದರೂ ಸಲಹೆ ನೀಡಿದರೆ ಉಡಾಫೆಯಿಂದ ಮಾತನಾಡುತ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಪೂಜಾರಿ ಕಿಡಿಕಾರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News