×
Ad

ಬಿಜೆಪಿ ಮುಖಂಡ ದೇರಣ್ಣ ರೈ

Update: 2016-12-13 22:49 IST

ಪುತ್ತೂರು, ಡಿ.13  : ಪುತ್ತೂರು ತಾಲ್ಲೂಕಿನ ಪಾಣಾಜೆ ಗ್ರಾಮದ ಗಿಳಿಯಾಲು ನಿವಾಸಿಯಾಗಿರುವ ಬಿಜೆಪಿ ಮುಖಂಡ ದೇರಣ್ಣ ರೈ ಗಿಳಿಯಾಲು (49) ಅಲ್ಪ ಕಾಲದ ಅನಾರೋಗ್ಯದಿಂದಾಗಿ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.

ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೊಳಗಾಗಿದ್ದ ಅವರನ್ನು ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಮಂಗಳವಾರ ಬೆಳಿಗ್ಗೆ ನಿಧನರಾದರು.

    ಪ್ರಸ್ತುತ ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿದ್ದ ದೇರಣ್ಣ ರೈ ಗಿಳಿಯಾಲು ಅವರು ಈ ಹಿಂದೆ ಪಾಣಾಜೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಪಾಣಾಜೆ ಬಿಜೆಪಿ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಈ ಹಿಂದೆ ಅವರು ಪಕ್ಷ ಸಂಘಟನೆ ಮಾಡಿದ್ದರು. ಪಾಣಾಜೆ ಶಾರದೋತ್ಸವ ಸಮಿತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಅವರು ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರೀಯರಾಗಿದ್ದರು.

 ಮೃತ ದೇರಣ್ಣ ರೈ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಮೃತರ ನಿಧನಕ್ಕೆ ಬಿಜೆಪಿ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News