ಮೇಟಿ ರಾಸಲೀಲೆ ಪ್ರಕರಣ ಸಿಐಡಿ ತನಿಖೆಗೆ : ಸಿಎಂ
Update: 2016-12-14 15:03 IST
ಬೆಂಗಳೂರು, ಡಿ.14: ಮಾಜಿ ಸಚಿವ ಎಚ್ವೈ ಮೇಟಿ ಅವರ ರಾಸಲೀಲೆ ಪ್ರಕರಣವನ್ನು ಮೇಟಿಯವರ ಮನವಿಯ ಮೇರೆಗೆ ಸಿಐಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆದೇಶ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಸಿಐಡಿ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡಲಿದೆ ಎಂದು ಹೇಳಿದ್ದಾರೆ.
ಎಚ್ವೈ ಮೇಟಿ ರಾಜೀನಾಮೆಯನ್ನು ಅಂಗೀಕಾರ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿರುವುದಾಗಿ ಹೇಳಿದ್ದಾರೆ.
ನಾಮಫಲಕ ತೆರವು: ಎಚ್ವೈ ಮೇಟಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಿಗೆ ಅವರ ಹೆಸರಿನಲ್ಲಿದ್ದ ನಾಮಫಲಕವನ್ನು ತೆಗದು ಹಾಕಲಾಗಿದೆ.