ಜಯಲಲಿತಾ ಸಾವಿನ ಬಗ್ಗೆ ಸಿಬಿಐ ತನಿಖೆ ಕೋರಿ ಸುಪ್ರೀಂಗೆ ಅರ್ಜಿ
Update: 2016-12-15 13:57 IST
ಹೊಸದಿಲ್ಲಿ, ಡಿ.15: ತಮಿಳುನಾಡಿನ ಮಾಜಿ ಮುಖ್ಯ ಮಂತ್ರಿ ಜೆ. ಜಯಲಲಿತಾ ಅವರ ಸಾವಿನ ಬಗ್ಗೆ ಸಿಬಿಐ ತನಿಖೆಗೆ ಆದೇಶ ನೀಡುವಂತೆ ಎನ್ಜಿಒ-ತೆಲುಗು ಯುವಶಕ್ತಿ ಸುಪ್ರಿಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ತೆಲುಗು ಯುವಶಕ್ತಿ ಅಧ್ಯಕ್ಚ ಜಗದೀಶ್ ರೆಡ್ಡಿ ಅವರು ಬುಧವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಜಯಲಲಿತಾ ಅವರ ಸಾವಿಗೆ ಕಾರಣ ಗೊತ್ತಾಗಿಲ್ಲ. ಅವರ ನಿಗೂಢ ಸಾವಿನ ಬಗ್ಗೆ ತನಿಖೆ ನಡೆಸಿ ಜನತೆಗೆ ಸರಿಯಾದ ಮಾಹಿತಿಯನ್ನು ಒದಗಿಸುವಂತೆ ಜಗದೀಶ್ ರೆಡ್ಡಿ ಮನವಿ ಮಾಡಿದ್ದಾರೆ.