×
Ad

ಬೈಕ್-ಬೊಲೆರೋ ಢಿಕ್ಕಿ : ಪಿಡಿಓ ದುರ್ಮರಣ

Update: 2016-12-16 19:40 IST

ಹಾಸನ , ಡಿ.16 :  ಬೈಕ್ ಹಾಗೂ ಬೊಲೆರೋ ನಡುವೆ ನಡೆದ ಅಪಘಾತದಲ್ಲಿ ಪಿಡಿಓ ಅಧಿಕಾರಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಸಂಭವಿಸಿದೆ.
    ತಾಲೂಕಿನ ಕಿತ್ತನೆ ಗಡಿ ಭಾಗದಲ್ಲಿ ಚಲಿಸುತ್ತಿದ್ದಾಗ ಬೊಲೆರೋ ವಾಹನವು ಬೈಕಿಗೆ ಡಿಕ್ಕಿ ಹೊಡೆದು ಶಂಕರನಹಳ್ಳಿ ಗ್ರಾಮದ ನಿವಾಸಿ ಪಾಪಣ್ಣ (48) ಮೃತಪಟ್ಟಿದ್ದಾರೆ.

ಕಾರ್ಲೇ ಗ್ರಾಮ ಪಂಚಾಯಿತಿ ಪಿಡಿಓ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು  ಕರ್ತವ್ಯಕ್ಕೆ  ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ವೇಳೆ ಬೈಕ್‌ನಲ್ಲಿದ್ದ ಪಿಡಿಓ ನೆಲಕ್ಕೆ ಬಿದ್ದಾಗ ತಲೆಗೆ ಗಾಯವಾಗಿ ಮೃತಪಟ್ಟಿದ್ದಾರೆ.

ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿಗೆ ತೀವ್ರ ಗಾಯಗಳಾಗಿದೆ.

 ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News