ವ್ಯಕ್ತಿ ಆತ್ಮಹತ್ಯೆ
Update: 2016-12-17 23:06 IST
ತೀರ್ಥಹಳ್ಳಿ, ಡಿ.17: ತಾಲೂಕಿನ ಆರಗದಲ್ಲಿ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕೃಷ್ಣಮೂರ್ತಿ (55) ಎನ್ನಲಾಗಿದ್ದು, ಇವರು ಕೋಣಂದೂರಿನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು ಎನ್ನಲಾಗಿದೆ. ಮೃತರಿಗೆ ಪತ್ನಿ ಹಾಗೂ ಮೂವರು ಮಕ್ಕಳಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.