×
Ad

ಕಲ್ಲಡ್ಕ : ಅನುಗ್ರಹ ಮಹಿಳಾ ಕಾಲೇಜು ವಾರ್ಷಿಕೋತ್ಸವ

Update: 2016-12-18 17:04 IST

ವಿಟ್ಲ , ಡಿ.18  : ಸಮಾಜದಲ್ಲಿ ಮಹಿಳೆಗೆ ಸಿಗುವಂತಹ ಮಾತೃ ಶಕ್ತಿಯ ಗೌರವ ಸರ್ವಶ್ರೇಷ್ಠವಾಗಿದೆ ಎಂದು ಪುತ್ತೂರು ಶಾಸಕಿ ಟಿ. ಶಕುಂತಳಾ ಶೆಟ್ಟಿ ಹೇಳಿದರು. 

ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು , ಮಹಿಳಾ ಸಮಾನತೆಯು ಮಾತೃ ಶಕ್ತಿಯ ಗೌರವದ ಎದುರು ನಗಣ್ಯ . ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಎ.ಎಂ. ಖಾನ್ ಮಾತನಾಡಿ,  ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ತಮ್ಮ ಪುರೋಗತಿಗೆ ಉಪಯುಕ್ತವಾದ ವಿಷಯಗಳ ಬಗ್ಗೆ ಮಾತ್ರ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.

ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ಝೋನಲ್ ಕನ್ವೀನರ್ ಅಬ್ದುಸ್ಸಲಾಂ ಉಪ್ಪಿನಂಗಡಿ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್, ಪೊಲೀಸ್ ವೃತ್ತ ನಿರೀಕ್ಷಕ ಕೆ.ಎಂ. ರಫೀಕ್, ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ, ನಿವೃತ್ತ ಪ್ರಾಂಶುಪಾಲ ಹೆರಾಲ್ಡ್ ಎಸ್. ಫೆರ್ನಾಂಡಿಸ್, ಉದ್ಯಮಿ ಹಾಜಿ ಕೆ.ಎಸ್. ಮುಹಮ್ಮದ್ ಯಾಸಿರ್ ಕಲ್ಲಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಂಗಳೂರು ವಿವಿ ಸೆನೆಟ್ ಸದಸ್ಯ ರಿಯಾರ್ ಹುಸೈನ್ ಬಂಟ್ವಾಳ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮುಹಮ್ಮದ್ ಝಕರಿಯಾ ಕಲ್ಲಡ್ಕ, ಅನುಗ್ರಹ ವಿದ್ಯಾ ಸಂಸ್ಥೆಯ ಅಧ್ಯಕ್ಷ ಇಬ್ರಾಹಿಂ ಚೆಂಡಾಡಿ, ಸಂಚಾಲಕ ಯಾಸೀನ್ ಬೇಗ್, ಪದವಿಪೂರ್ವ ಕಾಲೇಜು ವಿದ್ಯಾರ್ಥಿ ನಾಯಕಿ ಕೌಸರ್, ಪದವಿ ಕಾಲೇಜು ವಿದ್ಯಾರ್ಥಿ ನಾಯಕಿ ಅವ್ವಮ್ಮ ಅನೈನಾ ಉಪಸ್ಥಿತರಿದ್ದರು.

ಇದೇ ವೇಳೆ ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಹಾಜಿ ಬಿ.ಎಚ್. ಖಾದರ್ ಹಾಗೂ ನಾಣ್ಯ ಹಾಗೂ ವಸ್ತು ಸಂಗ್ರಾಹಕ ಹಾಜಿ ಕೆ.ಎಸ್. ಮುಹಮ್ಮದ್ ಯಾಸಿರ್ ಅವರನ್ನು ಕಾಲೇಜು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಟ್ರಸ್ಟ್ ಕಾರ್ಯದರ್ಶಿ ಡಿ.ಕೆ. ಇಬ್ರಾಹಿಂ ಸ್ವಾಗತಿಸಿ, ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಜ್ಯೋತಿ ರತ್ನ ವರದಿ ವಾಚಿಸಿದರು. ಪದವಿ ಕಾಲೇಜು ಪ್ರಾಂಶುಪಾಲೆ ಸುಚಿತ್ರಾ ವಂದಿಸಿದರು.

ವಿದ್ಯಾರ್ಥಿನಿಯರಾದ ರೈಹಾನ್ ಕೆ. ಹಾಗೂ ಸುಫೈದಾ ಬಾನು ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News