ಕಲ್ಲಬೆಟ್ಟು ಶಾಲೆಯಲ್ಲಿ ಸೈಕಲ್ ವಿತರಣೆ

Update: 2016-12-20 16:55 GMT

ಮೂಡುಬಿದಿರೆ , ಡಿ.20  : ಉನ್ನತೀಕರಿಸಿದ ಸರಕಾರಿ ಜಿ.ಪಂ.ಹಿ.ಪ್ರಾ.ಶಾಲೆ ಕಲ್ಲಬೆಟ್ಟು ಇಲ್ಲಿ ಸರಕಾರದಿಂದ ವಿದ್ಯಾರ್ಥಿಗಳಿಗೆ ಕೊಡ ಮಾಡಿರುವ ಸೈಕಲ್‌ಗಳನ್ನು ಶಾಸಕ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮಂಗಳವಾರ ವಿತರಿಸಿದರು.

 ನಂತರ ಮಾತನಾಡಿದ ಜೈನ್ ಅವರು ಸರಕಾರವು ವಿದ್ಯಾರ್ಥಿಗಳಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ವಿದ್ಯೆಯಿಂದ ಗೌರವ ಹೆಚ್ಚುತ್ತದೆ. ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಅವರಿಂದ ಉತ್ತಮ ಶಿಕ್ಷಣವನ್ನು ಪಡೆದು ವಿವಿಧ ಕ್ಷೇತ್ರಗಳಲ್ಲಿ ಸೇವೆಗಳನ್ನು ಮಾಡುವ ಕನಸುಗಳನ್ನು ಕಾಣುವಂತೆ ಸಲಹೆ ನೀಡಿದರು.

 ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ, ಉಪಾಧ್ಯಕ್ಷ ವಿನೋದ್ ಸೆರಾವೋ, ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಲಿದ್ ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

 ಶಿಕ್ಷಕಿ ಉಷಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ವಿನಯ ಕುಮಾರ್ ವಂದಿಸಿದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News