ಡಿ.23ರಂದು ಪುಸ್ತಕ ಬಿಡುಗಡೆ, ಗಾಯನಗೋಷ್ಠಿ ಕಾರ್ಯಕ್ರಮ
ಮಂಗಳೂರು, ಡಿ.22: ಬಿಳಿಚುಕ್ಕೆ ಪ್ರಕಾಶನ, ಮಂಗಳೂರು ಸಂಸ್ಥೆಯ ವತಿಯಿಂದ ಪುಸ್ತಕ ಬಿಡುಗಡೆ ಮತ್ತು ಗಾಯನಗೋಷ್ಠಿ ಕಾರ್ಯಕ್ರಮವು ಡಿ.23ರಂದು ಸಂಜೆ 6:30ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಇತ್ತೀಚೆಗೆ ದಿವಂಗತರಾದ ಮಂಗಳೂರಿನ ಛಾಯಾಚಿತ್ರಗಾರ, ಬರಹಗಾರ ಅಹ್ಮದ್ ಅನ್ವರ್ ರವರ `ಪಯಣಿಗನ ಪದ್ಯಗಳು’ ಹಾಗೂ ಹಿರಿಯಸಾಹಿತಿ ಮುಹಮ್ಮದ್ ಬಡ್ಡೂರ್ ರವರ ‘ಬಡ್ಡೂರರ ಸದ್ದುಗಳು’ ಕವನ ಸಂಕಲನ, ಅನುಪಮ ಮಹಿಳಾ ಮಾಸಿಕದ ಪ್ರಧಾನ ಸಂಪಾದಕಿ ಶಹನಾಝ್ ಎಂ.ರವರ ‘ನಿನಗಾಗಿ’ (ಕಾದಂಬರಿ) ಮತ್ತು ಸನ್ಮಾರ್ಗ ವಾರಪತ್ರಿಕೆಯ ಸಂಪಾದಕ ಎ.ಕೆ.ಕುಕ್ಕಿಲರವರ ‘ಸರಸ-ಸಲ್ಲಾಪ’(ಲಲಿತ ಪ್ರಬಂಧ) ಎಂಬ ನಾಲ್ಕು ಪುಸ್ತಕಗಳು ಬಿಡುಗಡೆಯಾಗಲಿವೆ.
ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಮಲ್ಲಿಪಟ್ಟಣ ಹಾಗೂ ಖ್ಯಾತ ಹಾಸ್ಯ ಲೇಖಕಿ ಭುವನೇಶ್ವರಿ ಹೆಗಡೆ ಭಾಗವಹಿಸಲಿದ್ದಾರೆ.
ಶಾಂತಿ ಪ್ರಕಾಶನ ಮಂಗಳೂರು ಇದರ ವ್ಯವಸ್ಥಾಪಕ ಮುಹಮ್ಮದ್ ಕುಂಞಿ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ನ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ, ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್., ಮಹಿಳಾ ಮಂಡಲಗಳ ಒಕ್ಕೂಟದ ಸ್ಥಾಪಕಾಧ್ಯಕ್ಷೆ ಕೆ.ಎ.ರೋಹಿಣಿ, ನ್ಯೂಸ್ ಕನ್ನಡ ವೆಬ್ ಪೋರ್ಟಲ್ ನಿರ್ದೇಶಕ ಇಮ್ರಾನ್ ಖಾನ್ ಎರ್ಮಾಳ್ ಅತಿಥಿಗಳಾಗಿರುವರು.
ಬಳಿಕ ನಡೆಯುವ ಗಾಯನಗೋಷ್ಠಿಯಲ್ಲಿ ಮುಹಮ್ಮದ್ ಬಡ್ಡೂರ್, ನಾದ ಮಣಿನಾಲ್ಕೂರು, ಶರೀಫ್ ನಿರ್ಮುಂಜೆ, ಬಶೀರ್ ಅಹ್ಮದ್ ಕಿನ್ಯಾ, ಉಮರ್ ಮೌಲವಿ ಮಡಿಕೇರಿ, ಅಝ್ಹರುಲ್ಲಾ ಖಾಸಿಮಿ, ಸಲೀಮ್ ಬೋಳಂಗಡಿ ಭಾಗವಹಿಸಲಿದ್ದಾರೆ ಎಂದು ಬಿಳಿಚುಕ್ಕೆ ಪ್ರಕಾಶನದ ಅಧ್ಯಕ್ಷ ಎಸ್.ಎಂ.ಮುತ್ತಲಿಬ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.