ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮದ ವಿರುದ್ಧ ಮಾನನಷ್ಟ ಮೊಕದ್ದಮೆ: ಡಾ.ರಾಜೇಂದ್ರ ಕುಮಾರ್

Update: 2016-12-24 09:58 GMT

ಮಂಗಳೂರು, ಡಿ.24: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಿರುದ್ಧ ಅತ್ಯಂತ ವ್ಯವಸ್ಥಿತವಾಗಿ ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಬ್ಯಾಂಕ್‌ನ ಅಧ್ಯಕ್ಷಷ ಡಾ.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಶನಿವಾರ ಬ್ಯಾಂಕ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮವೊಂದು ಬ್ಯಾಂಕ್‌ನ ವಿರುದ್ಧ ಉದ್ದೇಶಪೂರಿತವಾಗಿ ಸುಳ್ಳು ಸುದ್ದಿ ಪ್ರಸಾರ ಮಾಡಿದೆ. ಇದಕ್ಕೆ ದಾಖಲೆಯಿದ್ದರೆ ಬಿಡುಗಡೆ ಮಾಡಲಿ. ವಿಚಾರಣೆ ಎದುರಿಸಲು ಸಿದ್ಧ ಎಂದು ಸ್ಪಷ್ಟಪಡಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್ 101 ಶಾಖೆಗಳ ಮೂಲಕ ಕಾರ್ಯಾಚರಿಸುತ್ತಿವೆ. ಆರ್‌ಬಿಐ ಆದೇಶದ ಬಳಿಕ ನ.10ರಿಂದ 14ರವರೆಗೆ 101 ಶಾಖೆಗಳಲ್ಲದೆ 167 ಪ್ರಾಥಮಿಕ ಪತ್ತಿನ ಸಹಕಾರಿ ಸಂಘ ಮತ್ತು ಅವುಗಳ 244 ಶಾಖೆಗಳಿಂದ ಹಾಗೂ ಒಟ್ಟಾರೆ 1,166 ಸಹಕಾರ ಸಂಘಗಳಿಂದ 386.65 ಕೋ. ರೂ. ಠೇವಣಿ ಮತ್ತು ಸಾಲದ ಖಾತೆಗೆ ಜಮೆಯಾಗಿದೆ ಎಂದು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News