ಎತ್ತಿನ ಹೊಳೆ ಯೋಜನೆಯ ಮಹತ್ವದ ಸಭೆ ಆರಂಭ

Update: 2016-12-26 06:48 GMT

ಬೆಂಗಳೂರು, ಡಿ.26: ಹದಿಮೂರು ಸಾವಿರ  ಕೋಟಿ ರೂ. ವೆಚ್ಚದ ಎತ್ತಿನಹೊಳೆ ಯೋಜನೆಯ ಸಂಬಂಧ ಮಹತ್ವದ ಸಭೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬೆಳಗ್ಗೆ ಆರಂಭಗೊಂಡಿದೆ.
ಸಭೆಯಲ್ಲಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್‌, ಪ್ರಮೋದ್‌ ಮದ್ವರಾಜ್‌, ಸಂಸದ ನಳೀನ್‌ ಕುಮಾರ್‌ ಕಟೀಲ್‌, ಶಾಸಕರಾದ ವಸಂತ ಬಂಗೇರ, ಕೋಟ ಶ್ರೀನಿವಾಸ ಪೂಜಾರಿ, ಶಕುಂತಳಾ ಶೆಟ್ಟಿ, ಅಭಯಚಂದ್ರ ಜೈನ್‌ ಮತ್ತು ಯೋಜನೆಯ ಪರವಿರೋಧಿ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News