ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ : ಮೂವರ ಬಂಧನ
Update: 2016-12-28 18:37 IST
ಸುಳ್ಯ , ಡಿ.28 : ಲಾರಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಟ ಮಾಡುತ್ತಿದ್ದ ಮೂರು ಆರೋಪಿಗಳನ್ನು ಪೊಲೀಸರು ಬೆಳ್ಳಾರೆಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳದ ಕೊಯಿಕೋಡ್ ನ ಶಮೀರ್, ಸುಬೀರ್ ಮತ್ತು ಮನಿಷ್ ಎಂದು ಗುರುತಿಸಲಾಗಿದೆ.
ನಿಂತಿಕಲ್ ಕಡೆಯಿಂದ ಬರುತ್ತಿದ್ದ ಕೇರಳ, ತಮಿಳುನಾಡು, ಕರ್ನಾಟಕದ ನೊಂದಾಣಿ ನಂಬ್ರ ಹೊಂದಿದಂತಹ ಲಾರಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು, ಬಂಧಿತರಿಂದ 10 ದನ, 2 ಕರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .