ಕರಾವಳಿ ಉತ್ಸವ : ಸರಕಾರಿ ಯೋಜನೆಗಳ ಮಾಹಿತಿ ಪ್ರದರ್ಶನ ಮಳಿಗೆ ಉದ್ಘಾಟನೆ

Update: 2016-12-28 13:46 GMT

ಮಂಗಳೂರು, ಡಿ.28: ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಸರಕಾರದ ವಿವಿಧ ಮಹತ್ವಾಕಾಂಕ್ಷಿ ಯೋಜನೆಗಳ ಮಾಹಿತಿ ಮತ್ತು ಪ್ರದರ್ಶನ ಮಳಿಗೆಯನ್ನು ಬುಧವಾರ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಮ್ಮಿಕೊಂಡ ಅನೇಕ ಮಹತ್ವಾಕಾಂಕ್ಷಿ ಯೊಜನೆಗಳ ಬಗ್ಗೆ ವಾರ್ತಾ ಇಲಾಖೆಯು ಸಾವಿರಾರು ಮಂದಿ ಸೇರುವ ಈ ಕರಾವಳಿ ಉತ್ಸವದಲ್ಲಿ ಮಾಹಿತಿ ಮತ್ತು ಪ್ರದರ್ಶನದ ವ್ಯವಸ್ಥೆ ಹಮ್ಮಿಕೊಂಡಿರುವುದು ಶ್ಲಾಘನಾರ್ಹ ಎಂದರು.

ಈ ಸಂದರ್ಭ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ, ಕಾರ್ಪೊರೇಟರ್ ಲತೀಫ್ ಕಂದುಕ ಮತ್ತಿತರರು ಉಪಸ್ಥಿತರಿದ್ದರು.

ಸರಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಸಾಲಮನ್ನಾ, ಪಶುಭಾಗ್ಯ, ಆರೋಗ್ಯ ಭಾಗ್ಯ, ಶಾದಿಭಾಗ್ಯ ಮತ್ತಿತರ ಯೋಜನೆಗಳ ಬಗ್ಗೆ ಮಾಹಿತಿ ಪ್ರದರ್ಶನ ಗಮನ ಸೆಳೆಯುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News