ನಾಳೆ ಸಮಾಜವಾದಿ ಪಕ್ಷದ ಶಾಸಕರ ಸಭೆ ಕರೆದ ಅಖಿಲೇಶ್
Update: 2016-12-30 21:14 IST
ಲಕ್ನೋ, ಡಿ.30: ಸಮಾಜವಾದಿ ಪಕ್ಷದಿಂದ ಆರು ವರ್ಷಗಳ ಅವಧಿಗೆ ಉಚ್ಛಾಟನೆಗೊಂಡಿರುವ ಮುಖ್ಯ ಮಂತ್ರಿ ಅಖಿಲೇಶ್ ಯಾದವ್ ಮುಂದಿನ ನಿಲುವನ್ನು ಚರ್ಚಿಸಲು ಶನಿವಾರ ಬೆಳಗ್ಗೆ 9 ಗಂಟೆಗೆ ತನ್ನ ನಿವಾಸದಲ್ಲಿ ಪಕ್ಷದ ಶಾಸಕರ ಸಭೆ ಕರೆದಿದ್ದಾರೆ.
ಸಮಾಜವಾದಿ ಪಕ್ಷದಿಂದ ಅಖಿಲೇಶ್ ಯಾದವ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವುದನ್ನು ವಿರೋಧಿಸಿ ಅವರ ಬೆಂಬಲಿಗರು ಪಕ್ಷದ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.