ಎತ್ತಿನಹೊಳೆ ವಿಚಾರದಲ್ಲಿ ಬಿಜೆಪಿ ನಾಯಕರಲ್ಲಿ ಯಾವುದೇ ಗೊಂದಲವಿಲ್ಲ: ಸಂಸದ ನಳಿನ್
Update: 2017-01-04 11:38 IST
ಮಂಗಳೂರು, ಜ.4: ಎತ್ತಿನಹೊಳೆ ಯೋಜನೆಗೆ ಬಿಜೆಪಿ ಬೆಂಬಲವಿದೆ ಎಂಬ ಯಡಿಯೂರಪ್ಪರವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಂಸದ ನಳಿನ್ ಕುಮಾರ್, ಎತ್ತಿನಹೊಳೆ ವಿಚಾರದಲ್ಲಿ ರಾಜ್ಯ ಮತ್ತು ಜಿಲ್ಲಾ ಬಿಜೆಪಿ ನಾಯಕರಲ್ಲಿ ಯಾವುದೇ ಗೊಂದಲವಿಲ್ಲ. ಯೋಜನೆಯ ಬಗ್ಗೆ ಅಧ್ಯಯನ ತಂಡ ರಚಿಸಿ ಎಂಬುದು ನಮ್ಮ ಬೇಡಿಕೆಯಾಗಿದ್ದು, ಯಡಿಯೂರಪ್ಪ ಜೊತೆ ಮಾತನಾಡಿ ಅವರ ಮನವೊಲಿಸುವುದಾಗಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.