ಲೈಂಗಿಕ ದೌರ್ಜನ್ಯ ಪ್ರಕರಣ : ವರದಿ ನೀಡಲು ರಾಜ್ಯಪಾಲರ ಸೂಚನೆ
Update: 2017-01-05 19:18 IST
ಬೆಂಗಳೂರು, ಜ.5: ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ವಜುಭಾಯಿ ವಾಲಾ ವರದಿ ನೀಡುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದ್ದಾರೆ.
ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಯುವತಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣದ ಕುರಿತು ಸರಕಾರ ಯಾವೆಲ್ಲಾ ಕ್ರಮ ಕೈಗೊಂಡಿದೆ ಎನ್ನುವ ಕುರಿತು ಸಮಗ್ರವಾದ ವಿವರಣೆ ನೀಡುವಂತೆ ರಾಜ್ಯ ಸರಕಾರದಿಂದ ವರದಿ ಕೇಳಿದ್ದಾರೆ ಎಂದು ಗೊತ್ತಾಗಿದೆ.