ಇಂದಿನಿಂದ ವಿದ್ಯಾವರ್ಧಕ ಶಾಲೆಯ ಸುವರ್ಣ ಮಹೋತ್ಸವ

Update: 2017-01-05 18:18 GMT

 ಮಂಜೇಶ್ವರ, ಜ.5: ಮೀಯಪದವು ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಜ.6 ಮತ್ತು 7ರಂದು ನಡೆಯಲಿದೆ

 ಜ.6ರಂದು ಬೆಳಗ್ಗೆ 10ರಿಂದ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 11ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾಭವನವನ್ನು ಶಾಸಕ ಪಿ.ಬಿ.ಅಬ್ದುರ್ರಝಾಕ್ ಉದ್ಘಾಟಿಸುವರು. ಖ್ಯಾತ ಸಾಹಿತಿ ವೈದೇಹಿ ಅಧ್ಯಕ್ಷತೆ ವಹಿಸುವರು. ಸುವರ್ಣ ಮಹೋತ್ಸವವನ್ನು ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಉದ್ಘಾಟಿಸುವರು. ಜ.7ರಂದು ಬೆಳಗ್ಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಡಾ.ಬಿ.ಎಂ ಹೆಗ್ಡೆ ಸಮಾರೋಪ ಭಾಷಣ ಮಾಡುವರು ಎಂದು ಸುವರ್ಣ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಜಯಪ್ರಕಾಶ್ ತೊಟ್ಟತ್ತೋಡಿ, ಶ್ರೀಧರ್ ರಾವ್, ಯೋಗೀಶ್ ರಾವ್, ಗೋಪಾಲಕೃಷ್ಣ ಭಟ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News