ನಾಳೆ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ
Update: 2017-01-05 18:21 GMT
ಮಂಗಳೂರು, ಜ.5: ನಡುಪದವಿನಲ್ಲಿರುವ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರಧಾನ ಕಾರ್ಯಕ್ರಮವು ಜ.7ರಂದು ಅಪರಾಹ್ನ 2ಗಂಟೆಗೆ ಕಾಲೇಜಿನಲ್ಲಿ ನಡೆಯಲಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ರಿಜಿಸ್ಟ್ರಾರ್ ಡಾ.ಎಚ್.ಎನ್.ಜಗನ್ನಾಥ ರೆಡ್ಡಿ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ.
ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಮೈಸೂರು ವಿವಿಯ ವಿಜ್ಞಾನ ಹಾಗೂ ತಂತ್ರಜ್ಞಾನ ಬೋಧಕವರ್ಗದ ಮಾಜಿ ಡೀನ್ಡಾ.ಸೈಯದ್ ಅಖೀಲ್ ಅಹ್ಮದ್, ಮಂಗಳೂರು ವಿವಿಯ ರಿಜಿಸ್ಟ್ರಾರ್ (ವೌಲ್ಯಮಾಪನ) ಡಾ. ಎ.ಎಂ.ಖಾನ್ ಮತ್ತಿತರ ಗಣ್ಯರು ಭಾಗವಹಿಸುವರು.
ಪಿ.ಎ.ಎಜುಕೇಶನಲ್ ಟ್ರಸ್ಟ್ನ ಚೇರ್ಮೆನ್ ಹಾಗೂ ಆಡಳಿತ ಟ್ರಸ್ಟಿ ಡಾ.ಪಿ.ಎ.ಇಬ್ರಾಹೀಂ ಹಾಜಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.