ಬೆಳೆ ವಿಮೆ ನೋಂದಣಿ ದಿನಾಂಕ ವಿಸ್ತರಣೆ

Update: 2017-01-05 18:27 GMT

ಉಡುಪಿ, ಜ.5: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಪಸಲ್ ಬಿಮಾ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ಅಸೂಚಿಸಲಾದ ಹಿಂಗಾರು ಹಂಗಾಮಿನ ಬೆಳೆಗಳಲ್ಲಿ ಬೆಳೆವಿಮೆ ನೋಂದಣಿಗೆ ಈ ಮೊದಲು ನಿಗದಿಪಡಿಸಲಾಗಿದ್ದ ಕೊನೆಯ ದಿನ ಡಿ.31ನ್ನು ಪರಿಷ್ಕರಿಸಿ ಜ.10ರವರೆಗೆ ವಿಸ್ತರಿಸಲಾಗಿದೆ.

ರೈತರು ಇದರ ಪ್ರಯೋಜನವನ್ನು ಪಡೆದು ಬೆಳೆ ವಿಮೆಗೆ ನಿಗದಿಪಡಿಸಿದ ಕೊನೆಯ ದಿನದ ಒಳಗೆ ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News