ಪಶ್ಚಿಮ ವಲಯ ಐಜಿಪಿ ಅಧಿಕಾರ ಸ್ವೀಕಾರ
Update: 2017-01-06 15:59 IST
ಮಂಗಳೂರು, ಜ.6: ದ.ಕ. ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾಗಿ ಪಿ.ಹರಿಶೇಖರನ್ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಪಶ್ಚಿಮ ವಲಯ ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜೆ.ಅರುಣ್ ಚಕ್ರವರ್ತಿಯವರು ಇಂದು ಹರಿಶೇಖರನ್ರಿಗೆ ಅಧಿಕಾರ ಹಸ್ತಾಂತರ ಮಾಡಿದರು ಪಿ.ಹರಿಶೇಖರನ್ ಅವರು ಈ ಹಿಂದೆ ಬೆಂಗಳೂರು ನಗರ (ಪೂರ್ವ ವಲಯ) ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ, ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮಂಗಳೂರು ಪಶ್ಚಿಮ ವಲಯ ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜೆ.ಅರುಣ್ ಚಕ್ರವರ್ತಿಯವರನ್ನು ಬೆಂಗಳೂರಿನ ಆಂತ ರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.