×
Ad

ಉಳ್ಳಾಲ : ತಂಡದಿಂದ ಇಬ್ಬರ ಕೊಲೆಯತ್ನ

Update: 2017-01-07 23:31 IST

ಉಳ್ಳಾಲ, ಜ.7: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಲಾರಿ ಢಿಕ್ಕಿ ಹೊಡೆಸಿ, ಮರದ ದಿಮ್ಮಿಯಿಂದ ಹೊಡೆದು ಕೊಲೆಗೆ ಯತ್ನಿಸಿರುವ ಘಟನೆ ಶನಿವಾರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರದಲ್ಲಿ ನಡೆದಿದೆ.

ಬಂಡಿಕೊಟ್ಯ ನಿವಾಸಿ ನಿಫಾನ್ (21) ಮತ್ತು ಮುಕ್ಕಚ್ಚೇರಿ ನಿವಾಸಿ ಹನೀಫ್ (21) ಕೊಲೆಯತ್ನಕ್ಕೊಳಗಾದವರು.

ಆರೋಪಿಗಳನ್ನು ಶರೀಫ್, ಇಮ್ತಿಯಾಝ್, ಆತುಫ್, ಇರ್ಷಾದ್, ಹಕೀಂ ಮತ್ತು ಇಬ್ಬರು ಸಹೋದರರ ಸಹಿತ 25 ಮಂದಿಯ ತಂಡ ತಲವಾರು, ದೊಣ್ಣೆಗಳಿಂದ ಹೊಡೆದು ಹತ್ಯೆಗೆ ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ.

ಇಲೆಕ್ಷ್ಟೀಷಿಯನ್ ಕೆಲಸ ಮಾಡುತ್ತಿರುವ ನಿಫಾನ್ ಮತ್ತು ಹನೀಫ್ ಕೆಲಸದ ನಿಮಿತ್ತ ಉಳ್ಳಾಲ ಕಡೆಗೆ ಆಕ್ಟೀವಾ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಭಾಗದಿಂದ ಮರಳು ಹೇರಿಕೊಂಡು ಬಂದ ಲಾರಿ ಸ್ಕೂಟರಿಗೆ ಢಿಕ್ಕಿ ಹೊಡೆಸಿ ಇಬ್ಬರನ್ನು ಕೆಳಗೆ ಉರುಳಿಸಿದ್ದಾರೆ. ಬಳಿಕ ಮರದ ದಿಮ್ಮಿಯಿಂದ ಬಡಿದು ಕೊಲೆಗೆ ಯತ್ನಿಸಿದ್ದಾರೆ. ಆರೋಪಿಗಳು ನಿಫಾನ್ ಬಳಿಯಿದ್ದ ರೂ.25,000 ನಗದು ದೋಚಿದ್ದಾರೆಂದು ಆರೋಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News