ಧರ್ಮಸ್ಥಳ: ಗೋಮಾಂಸ ಸಾಗಾಟ ಮಾಡುತ್ತಿದ್ದ ನಾಲ್ವರ ಸೆರೆ

Update: 2017-01-09 06:46 GMT

ಬೆಳ್ತಂಗಡಿ, ಜ.9: ಆಟೊ ರಿಕ್ಷಾವೊಂದರಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ರವಿವಾರ ತಡರಾತ್ರಿ ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಗಳಾದ ವಿಶ್ವನಾಥ್, ಜೋಸೆಫ್, ಜಾನ್ ಹಾಗೂ ಕಿಟ್ಟು ಮುಗೇರ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ನಿನ್ನೆ ತಡರಾತ್ರಿ 1:30ರ ಸುಮಾರಿಗೆ ರಿಕ್ಷಾದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿಯಾಧಾರದಲ್ಲಿ ಕಾರ್ಯಾಚರಣೆಗಿಳಿದ ಧರ್ಮಸ್ಥಳ ಪೊಲೀಸರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಳೆಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಬಂಧಿಸಿದ್ದಾರೆ.

ಸ್ಥಳೀಯ ಬಜರಂಗ ದಳದ ಕಾರ್ಯಕರ್ತರು ನೀಡಿದ ಮಾಹಿತಿಯನ್ವಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದರೆನ್ನಲಾಗಿದೆ. ಇದೇ ವೇಳೆ ಇಲ್ಲಿ ನಿರಂತರವಾಗಿ ಅಕ್ರಮ ಗೋಮಾಂಸ ಮಾರಾಟ ಕಾರ್ಯ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ಬಜರಂಗ ದಳದ ಕಾರ್ಯಕರ್ತರೇ ದಾಳಿ ನಡೆಸಿ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ವದಂತಿಯೂ ಹರಡುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News