​ಗಂಗುಲಿಗೆ ಜೀವ ಬೆದರಿಕೆ

Update: 2017-01-09 17:27 GMT

 ಕೋಲ್ಕತಾ,ಜ.9: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗುಲಿಗೆ ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ಜಿಲ್ಲಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸದಂತೆ ಜೀವ ಬೆದರಿಕೆಯ ಪತ್ರ ಬಂದಿದೆ.
ಜ.19ರಂದು ಮಿಡ್ನಾಪುರ ಜಿಲ್ಲಾ ಸ್ಫೋರ್ಟ್ಸ್ ಒಕ್ಕೂಟದ ವತಿಯಿಂದ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸದಂತೆ ಗಂಗುಲಿಗೆ ಬೆದರಿಕೆಯ ಪತ್ರ ಸಿಕ್ಕಿದೆ.
ಸೌರವ್ ಗಂಗುಲಿ ಅವರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.
ಸೌರವ್ ಗಂಗುಲಿ ಅವರು ವಿವಿಧ ಜಿಲ್ಲೆಗಳಲ್ಲಿ ಕ್ರಿಕೆಟ್ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News