×
Ad

ಹಾವು ಕಚ್ಚಿ ಗಂಭೀರ ಸ್ಥಿತಿಯಲ್ಲಿದ್ದ ಕೂಲಿ ಕಾರ್ಮಿಕನ ಸಾವು

Update: 2017-01-10 18:35 IST

ಬಂಟ್ವಾಳ, ಜ. 10: ಹಾವು ಕಚ್ಚಿ ಗಂಭೀರ ಸ್ಥಿತಿಯಲ್ಲಿದ್ದ ಕೂಲಿ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕರೋಪಾಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಧರ್ಮನಗರ ಗೊಳ್ಳರ ಹಟ್ಟಿ ನಿವಾಸಿ ದುರ್ಗಪ್ಪ ಎಂಬವರ ಪುತ್ರ ರಾಜಪ್ಪ ಮೃತಪಟ್ಟ ಕೂಲಿ ಕಾರ್ಮಿಕ.

ಇವರು ಕರೋಪಾಡಿ ಗ್ರಾಮದ ಕುಳ ಎಂಬಲ್ಲಿಯ ಮನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಡಿ. 31ರಂದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಜಂತು ಕಚ್ಚಿ ಗಂಭೀರ ಗಾಯಗೊಳಿಸಿತ್ತು. ತಕ್ಷಣವೇ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News