ಪ್ರೇಮ ನಿರಾಕರಣೆ: ಆತ್ಮಹತ್ಯೆಗೆ ಯತ್ನ

Update: 2017-01-11 17:53 GMT


ಮೂಡಿಗೆರೆ, ಜ.11: ಪ್ರೇಮ ನಿರಾಕರಿಸಿದ್ದಕ್ಕೆ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯುವಕ ಯತ್ನಿಸಿದ ಘಟನೆ ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದಾರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವನನ್ನು ಹಾಸನ ಜಿಲ್ಲೆಯ ಬೇಲೂರು ಮೂಲದ ಸಂತೋಷ್‌ಕುಮಾರ್ ಎಂದು ಗುರುತಿಸಲಾಗಿದೆ. ಈತ ಯುವತಿಯೋರ್ವಳನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡು ರಂಪಾಟ ಮಾಡಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎನ್ನಲಾಗಿದೆ.
ಸ್ಥಳೀಯರು ಯುವಕ ಗ್ರಾಪಂನಲ್ಲಿ ಆಡಿಟಿಂಗ್‌ಗೆ ಬಂದಿದ್ದ ಯುವತಿಯೋರ್ವಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಎಂದು ಹೇಳಲಾಗಿದೆ. ಯುವತಿಯು ಪ್ರೀತಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯುವಕನಿಗೆ ಕೈಗೆ ಚಿಕಿತ್ಸೆ ನೀಡಿರುವ ಗ್ರಾಮಸ್ಥರು ಗ್ರಾಮದಿಂದ ಆತನನ್ನು ಓಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News