ಜೆಸಿಬಿಎಂ ಕಾಲೇಜು ಪ್ರಾಂಶುಪಾಲ ಸಹಿತ ನಾಲ್ವರ ವಿರುದ್ಧ ಪ್ರಕರಣ

Update: 2017-01-12 04:39 GMT

ಚಿಕ್ಕಮಗಳೂರು, ಜ.12: ಜಿಲ್ಲೆಯ ಶೃಂಗೇರಿಯಲ್ಲಿ ಕಾಲೇಜು ವಿದ್ಯಾರ್ಥಿ ಅಭಿಷೇಕ್ ಎಂಬಾತ ಡೆತ್‌ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಜೆಸಿಬಿಎಂ ಕಾಲೇಜಿನ ಪ್ರಾಂಶುಪಾಲರು ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

 ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಜೆಸಿಬಿಎಂ ಕಾಲೇಜಿನ ಪ್ರಾಂಶುಪಾಲ ದೇವದಾಸ್ ನಾಯಕ್, ಎನ್‌ಎಸ್‌ಯುಐ ಕಾರ್ಯಕರ್ತರಾದ ಅಂಜನ್, ಅಶ್ರತ್ ಹಾಗೂ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೋಮು ಪ್ರಚೋದಕ ಭಾಷಣಕಾರನೊಬ್ಬನನ್ನು ಕರೆಸುವ ವಿಚಾರದಲ್ಲಿ ಉಂಟಾದ ಸಂಘರ್ಷ ವಿದ್ಯಾರ್ಥಿಯ ಆತ್ಮಹತ್ಯೆ ಮೂಲಕ ಇನ್ನೊಂದು ತಿರುವು ಪಡೆದುಕೊಂಡಿತ್ತು.

ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ತರಗತಿಯಲ್ಲಿ ಕಲಿಯುತ್ತಿದ್ದ ಎಬಿವಿಪಿ ಕಾರ್ಯಕರ್ತ ಅಭಿಷೇಕ್(21) ತನ್ನಮನೆ ಬಳಿಯ ಮರವೊಂದರಲ್ಲಿ ನೇಣಿಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ಡೆತ್‌ನೋಟು ಬರೆದಿಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News