ಉಚ್ಚಿಲ: ತಂಡದಿಂದ ವ್ಯಕ್ತಿಗೆ ಹಲ್ಲೆ

Update: 2017-01-12 16:35 GMT

ಉಳ್ಳಾಲ,ಜ.12: ಉಚ್ಚಿಲ ಕಡಲ ಕಿನಾರೆಯಲ್ಲಿ ವಾಲಿಬಾಲ್ ಆಟವಾಡಲು ತಯಾರಾಗುತ್ತಿದ್ದ ವ್ಯಕ್ತಿಯೋರ್ವರಿಗೆ ಎರಡು ಬೈಕ್‌ಗಳಲ್ಲಿ ಬಂದ ಆರು ಜನರ ತಂಡವೊಂದು ಗಂಭೀರ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ ಸಂಜೆ ನಡೆದಿದೆ.

  ಉಚ್ಚಿಲ ಪೆರಿಬೈಲ್ ನಿವಾಸಿ ಮಹಮ್ಮದ್ ಇಕ್ಬಾಲ್(35) ಎಂಬವರೇ ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಇಕ್ಬಾಲ್ ನಿತ್ಯವೂ ತನ್ನ ಸ್ನೇಹಿತರೊಂದಿಗೆ ಉಚ್ಚಿಲ ಸಮುದ್ರ ಕಿನಾರೆಯಲ್ಲಿ ವಾಲಿಬಾಲ್ ಆಟವಾಡುತ್ತಿದ್ದು, ಎಂದಿನಂತೆ ಗುರುವಾರವೂ ಸಂಜೆ ಆಡವಾಡಲು ತೆರಳುತ್ತಿದ್ದಾಗ ಎರಡು ಬೈಕ್‌ಗಳಲ್ಲಿ ಬಂದ ಅಪರಿಚಿತ ತಂಡವೊಂದು ಇಕ್ಬಾಲ್‌ನ ತಲೆ ಮತ್ತು ಕೈಗಳಿಗೆ ರಾಡ್ ಹಾಗೂ ಸೋಂಟೆಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಗಂಭೀರ ಗಾಯಗೊಂಡ ಇಕ್ಬಾಲ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಎಸಿಪಿ ಶ್ರುತಿ, ಉಳ್ಳಾಲ ಠಾಣಾ ಇನ್‌ಸ್ಪೆಕ್ಟರ್ ಗೋಪಿಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News