ಜ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

Update: 2017-01-14 14:01 GMT

ಉಡುಪಿ, ಜ.14: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟವನ್ನು ಜ.17ರಂದು ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಬೆಳಗ್ಗೆ 10:30ಕ್ಕೆ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ 
ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿರುವರು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಯಕರ ಸುವರ್ಣ ವಹಿಸಲಿರುವರು.

ಮುಖ್ಯ ಅತಿಥಿಗಳಾಗಿ ಉಡುಪಿ ಜೈದೇವ್ ಮೋಟಾರ್ಸ್‌ನ ಸಿಇಓ ಜಯರಾಮ್ ಸುವರ್ಣ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ವಾರ್ತಾಧಿಕಾರಿ ರೋಹಿಣಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಭಾಗವಹಿಸಲಿರುವರು.

ಬೆಳಗ್ಗೆ 8:30ಕ್ಕೆ ಆರಂಭಗೊಳ್ಳಲಿರುವ ಕ್ರೀಡಾಕೂಟದಲ್ಲಿ ಓಟ, ಮಡಕೆ ಒಡೆಯುವ ಸ್ಪರ್ಧೆ, ಮೂರು ಕಾಲು ಓಟ, ಗೋಣಿ ಚೀಲ ಓಟ ಹಾಗೂ ಇತರ ಮನರಂಜನಾ ಸ್ಪರ್ಧೆಗಳು, ವಾಲಿಬಾಲ್, ಕಬಡ್ಡಿ, ಹಗ್ಗಜಗ್ಗಾಟ ಸ್ಪರ್ಧೆ ಗಳು ಜರಗಲಿವೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News