ವಿದ್ಯಾರ್ಥಿಗೆ ಹಲ್ಲೆ : ಇಬ್ಬರ ವಿರುದ್ದ ಪ್ರಕರಣ ದಾಖಲು

Update: 2017-01-14 14:26 GMT

ಪುತ್ತೂರು , ಜ.14  : ಕಾಲೇಜು ಆವರಣದಿಂದ ಹೊರಬರುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬನಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಜೊತೆಗಾರನೊಬ್ಬನ ಜೊತೆ ಸೇರಿಕೊಂಡು ಹಲ್ಲೆ ನಡೆಸಿದ ಘಟನೆ ಇಲ್ಲಿನ ಸಂತ ಫಿಲೋಮಿನಾ ಕಾಲೇಜು ಆವರಣದಲ್ಲಿ ಶುಕ್ರವಾರ ನಡೆದಿದ್ದು, ಘಟನೆಯ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪುತ್ತೂರು ತಾಲ್ಲೂಕಿನ ನರಿಮೊಗ್ರು ಗ್ರಾಮದ ಪುರುಷರಕಟ್ಟೆ ನಿವಾಸಿ ಅಬ್ದುಲ್ ಕುಂಞಿ ಅವರ ಪುತ್ರ , ಪುತ್ತೂರಿನ ಸಂತ ಫಿಲೋಮಿನಾ ಫಿಲೋಮಿನಾ ಕಾಲೇಜಿನ ಅಂತಿಮ ವರ್ಷದ ಬಿಬಿಎಂ ವಿದ್ಯಾರ್ಥಿ ಜೈನುದ್ದೀನ್ (21) ಎಂಬವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. 

ತಾನು ಕಾಲೇಜು ಆವರಣ ಗೇಟಿನಿಂದ ಹೊರಬರುತ್ತಿದ್ದ ವೇಳೆ ನಮ್ಮ ಕಾಲೇಜಿನ ವಿದ್ಯಾರ್ಥಿ ಸಫಾನ್ ಎಂಬಾತ ಆತನೊಂದಿಗಿದ್ದ ಈಸುಬು ಯಾನೆ ಫೈಝಲ್ ಯಾನೆ ಫಯಾಝ್ ಎಂಬಾತನೊಂದಿಗೆ ಸೇರಿಕೊಂಡು ತನ್ನನ್ನು ಅಚಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಸಫಾನ್ ಮತ್ತು ಈಸುಬು ಯಾನೆ ಫೈಝಲ್ ಯಾನೆ ಫಯಾಝ್ ಎಂಬವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News