ಉಪ್ಪಿನಂಗಡಿ : ಮಗನಿಂದ ತಂದೆಯ ಕೊಲೆ
Update: 2017-01-16 05:58 GMT
ಉಪ್ಪಿನಂಗಡಿ, ಜ.15: ತಂದೆ ಮತ್ತು ಮಗನ ನಡುವೆ ಮಾತಿನ ಚಕಮಕಿ ನಡೆದು ಮಗ ತಂದೆಯನ್ನು ಕೊಲೆಗೈದಿರುವ ಘಟನೆ ರವಿವಾರ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಕುದ್ಲೂರು ಮನೆ ನಿವಾಸಿ ಆದಂ (55) ಎಂಬವರು ಕೊಲೆಗೀಡಾದವರು.
ಭೂಮಿಯ ವಿಚಾರವಾಗಿ ಆದಂ ಹಾಗೂ ಅವರ ಮಗ ಅಬೂಬಕರ್ ನಡುವೆ ಮನಸ್ತಾಪವಿದ್ದು, ಶನಿವಾರ ಈ ಸಂಬಂಧ ಉಪ್ಪಿನಂಗಡಿ ಬ್ಯಾಂಕ್ ರಸ್ತೆಯಲ್ಲಿರುವ ಮಗನ ತರಕಾರಿ ಅಂಗಡಿಗೆ ಬಂದ ಆದಂ ಮಗನೊಂದಿಗೆ ಮಾತಿನ ಚಕಮಕಿಗಿಳಿದಿದ್ದರು. ಮಾತು ವಿಕೋಪಕ್ಕೆ ತಿರುಗಿದಾಗ ತಾಳ್ಮೆ ಕಳೆದುಕೊಂಡ ಮಗ ಅಂಗಡಿಯಲ್ಲಿದ್ದ ರಾಡ್ನಿಂದ ತಂದೆಯ ತಲೆಗೆ ಹೊಡೆದು ಗಾಯಗೊಳಿಸಿದ್ದಾರೆ ಎನ್ನಲಾಗಿದೆ.
ಅಲ್ಲದೇ, ಗಾಯಗೊಂಡ ತಂದೆಯನ್ನು ಕೂಡಲೇ ವಾಹನವೊಂದನ್ನು ಗೊತ್ತುಪಡಿಸಿ ಆಸ್ಪತ್ರೆಗೆ ದಾಖಲಿಸಿದರಾದರೂ, ಆದಂ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ರಾತ್ರಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.