ನಿಯಂತ್ರಣ ತಪ್ಪಿದ ಬಸ್ ಗೋಡೆಗೆ ಢಿಕ್ಕಿ: ಇಬ್ಬರಿಗೆ ಗಾಯ

Update: 2017-01-16 18:38 GMT

 ಕಾಸರಗೋಡು, ಜ.16: ಚಾಲಕನ ನಿಯಂತ್ರಣ ತಪ್ಪಿದಬಸ್ಸೊಂದು ರಸ್ತೆ ಬದಿಯ ಗೋಡೆಗೆ ಢಿಕ್ಕಿ ಹೊಡೆದು ಇಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ.

ನಗರದ ಹೊರವಲಯದ ಸಂತೋಷ್ ನಗರದಲ್ಲಿ ಘಟನೆ ನಡೆದಿದ್ದು, ನಿಯಂತ್ರಣ ತಪ್ಪಿದ ಬಸ್ ಗೂಡಂಗಡಿ, ಬೈಕ್ ಮೇಲೆ ಹರಿದು ಹೋಗಿ ಗೋಡೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಾಯಗೊಂಡ ಇಬ್ಬರು ವ್ಯಕ್ತಿಗಳನ್ನು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News