×
Ad

ಯುವಜನ ಸಬಲೀಕರಣಕ್ಕೆ ಸರಕಾರ ಬದ್ಧ: ಪ್ರಮೋದ್

Update: 2017-01-17 20:05 IST

ಉಡುಪಿ, ಜ.17: ನಮ್ಮಲ್ಲಿ ವಿದ್ಯಾವಂತರಿಗೇನೂ ಕೊರತೆ ಇಲ್ಲ. ಆದರೆ ನಿರುದ್ಯೋಗಿ ವಿದ್ಯಾವಂತರನ್ನು ವೃತ್ತಿ ಕೌಶಲ್ಯ ಪರಿಣತರನ್ನಾಗಿಸಲು ರಾಜ್ಯದಲ್ಲೇ ಪ್ರಥಮ ಬಾರಿಗೆ ಉದ್ಯೋಗಾಧಾರಿತ ಉಚಿತ ಕೌಶಲ್ಯ ತರಬೇತಿಯನ್ನು ಉಡುಪಿಯಲ್ಲಿ ಆಯೋಜಿಸಲಾಗಿದೆ. ಯುವಜನರ ಸಬಲೀಕರಣಕ್ಕೆ ಸರಕಾರ ಬದ್ಧವಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ನಗರದ ಪುರಭವನದಲ್ಲಿ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಮಂಗಳೂರು ವಿವಿ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಪವರ್‌ಲಿಫ್ಟಿಂಗ್ ಚಾಂಪಿಯನ್ ಶಿಪ್ ಮತ್ತು ರಕ್ತದಾನ ಶಿಬಿರವನ್ನು ದೀಪ ಬೆಳಗಿಸುವ ಮೂಲಕ ಮಂಗಳವಾರ ಉ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಉದ್ಯೋಗಾಧಾರಿತ ಉಚಿತ ಕೌಶಲ್ಯ ತರಬೇತಿಯುವಜನರ ಸಬಲೀಕರಣಕ್ಕೆ ಮಾಡಿದ ಹೊಸ ಪ್ರಯೋಗವಾಗಿದ್ದು, ಅರ್ಹ ವಿದ್ಯಾವಂತರು ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಚಿವರು ಕಿವಿಮಾತು ಹೇಳಿದರು. ಅದೇ ರೀತಿ ಯುವಜನತೆಗೆ ರಕ್ತದಾನದ ಮತ್ವವನ್ನು ಸಚಿವರು ವಿವರಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಯಶಪಾಲ್ ಸುವರ್ಣ, ದಿನೇಶ್ ಕುಂದರ್, ಪರ್ಕಳ ಲಯನ್ಸ್ ಕ್ಲಬ್ ಅಧ್ಯಕ್ಷ ರಾಧಾಕೃಷ್ಣ ಮೆಂಡನ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹಾಗೂ ರೆಡ್‌ಕ್ರಾಸ್ ಕಾರ್ಯದರ್ಶಿ ಜನಾರ್ದನ್, ಮಂಗಳೂರು ವಿವಿಯ ಹರಿದಾಸ್ ಕೂಳೂರು, ಸತೀಶ್ ಕುಮಾರ್ ಕುದ್ರೋಳಿ, ಕಾಲೇಜಿನ ಪ್ರಾಂಶುಪಾಲ್ ಪ್ರೊ.ಜಗದೀಶ್ ರಾವ್, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜು ಅಭಿವೃದ್ಧಿ ಸಮಿತಿಯ ಯಶಪಾಲ್ ಸುವರ್ಣ, ದಿನೇಶ್ ಕುಂದರ್, ಪರ್ಕಳ ಲಯನ್ಸ್ ಕ್ಲಬ್ ಅ್ಯಕ್ಷರಾಕೃಷ್ಣ ಮೆಂಡನ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹಾಗೂ ರೆಡ್‌ಕ್ರಾಸ್ ಕಾರ್ಯದರ್ಶಿ ಜನಾರ್ದನ್, ಮಂಗಳೂರು ವಿವಿಯ ಹರಿದಾಸ್ ಕೂಳೂರು, ಸತೀಶ್ ಕುಮಾರ್ ಕುದ್ರೋಳಿ, ಕಾಲೇಜಿನ ಪ್ರಾಂಶುಪಾಲ್ ಪ್ರೊ.ಜಗದೀಶ್ ರಾವ್, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಪ್ರೊ. ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News