ಬೈಕ್ ಅಪಘಾತ: ಸವಾರ ಮೃತ್ಯು
Update: 2017-01-18 18:39 GMT
ಹಿರಿಯಡ್ಕ, ಜ.18: ಪೆರ್ಡೂರು ಪೆಟ್ರೋಲ್ ಬಂಕ್ ಬಳಿಯ ಗ್ಯಾರೇಜ್ ಎದುರು ಬೈಕೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ನಾಗೇಶ್ ಆಚಾರ್ಯ(28) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮಣಿಪಾಲ ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರ ಗಾಯಗೊಂಡ ನಾಗೇಶ್ ಆಚಾರ್ಯ ಚಿಕಿತ್ಸೆ ಲಕಾರಿಯಾಗದೆ ರಾತ್ರಿ 8ಗಂಟೆಗೆ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.