ಸುಳ್ಯದಲ್ಲಿ ಅಂಬಿಗರ ಚೌಡಯ್ಯ ಜಯಂತಿ

Update: 2017-01-22 18:42 GMT

ಸುಳ್ಯ, ಜ.22: ತಾಲೂಕು ನಾಡಹಬ್ಬಗಳ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವು ಸುಳ್ಯ ತಾಪಂ ಸಭಾಂಗಣದಲ್ಲಿ ನಡೆಯಿತು.

ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ ಕಾರ್ಯಕ್ರಮ ಉದ್ಘಾಟಿಸಿದರು. ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕ ಸಂಜೀವ ಕುದ್ಪಾಜೆ ವಿಶೇಷ ಉಪನ್ಯಾಸ ನೀಡಿದರು. ಎಪಿಎಂಸಿ ಅಧ್ಯಕ್ಷ ಜಾಕೆ ಮಾಧವ ಗೌಡ ಮಾತನಾಡಿದರು. ನಪಂ ಅಧ್ಯಕ್ಷೆ ಶೀಲಾವತಿ ಮಾಧವ ವೇದಿಕೆಯಲ್ಲಿದ್ದರು.

ಉಪ ತಹಶೀಲ್ದಾರ್ ರಾಮಣ್ಣ ನಾಯ್ಕ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಕಾರಿ ಬಿ.ಎಸ್.ಕೆಂಪಲಿಂಗಪ್ಪ ವಂದಿಸಿದರು. ಗ್ರಾಮ ಕರಣಿಕ ತಿಪ್ಪೇಶಪ್ಪ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News