ಯುವಕನ ಮೇಲೆ ಹಲ್ಲೆ

Update: 2017-01-23 17:48 GMT

ದಾವಣಗೆರೆ, ಜ.23: ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ನಾಯಕ ಸಮಾಜದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.


ತಾಲೂಕಿನ ಲೋಕಿಕೆರೆ ಗ್ರಾಮದ ಕೆ.ಟಿ. ಅಜಯಕುಮಾರ್ ಜ.18ರಂದು ದಾವಣಗೆರೆಗೆ ಸಿನೆಮಾ ನೋಡಲು ಬಂದಿದ್ದು, ಕೆಲವು ಕಿಡಿಗೇಡಿಗಳು ಆತನನ್ನು ಎಪಿಎಂಸಿ ಯಾರ್ಡ್‌ನ ನಿರ್ಜನ ಪ್ರದೇಶಕ್ಕೆ ಅಪಹರಿಸಿಕೊಂಡು ಹೋಗಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆದರೆ, ಈವರೆಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


ಇದೀಗ ಗ್ರಾಮದಲ್ಲಿ ಕುರುಬ ಹಾಗೂ ನಾಯಕ ಸಮಾಜದ ಮಧ್ಯೆ ವೈಷಮ್ಯಕ್ಕೆ ಕಾರಣವಾಗಿದೆ. ನಾಯಕ ಸಮಾಜದ ವಿದ್ಯಾರ್ಥಿಗಳು ದಾವಣಗೆರೆಯ ಶಾಲಾ-ಕಾಲೇಜುಗಳಿಗೆ ಬರಲು ಹಿಂಜರಿಯುತ್ತಿದ್ದಾರೆ. ಈಗಾಗಲೇ ದೂರು ನೀಡಿದ್ದರೂ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಗುಮ್ಮನೂರು ಮಲ್ಲಿಕಾರ್ಜುನ್, ನಾಗರಾಜಪ್ಪ, ಓಬಳೇಶಪ್ಪ, ಮಂಜಣ್ಣ, ಲಕ್ಷ್ಮಣ್, ಹನುಮಂತಪ್ಪಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News